×
Ad

ಆಡಳಿತಾಧಿಕಾರಿ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಕೇರಳ ಮಾಜಿ ಸಿಎಂ ಅಚ್ಯುತಾನಂದನ್ ರಾಜೀನಾಮೆ

Update: 2021-01-31 15:02 IST

ತಿರುವನಂತಪುರ: ಹಿರಿಯ ಸಿಪಿಎಂ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರು ಆರೋಗ್ಯದ ದೃಷ್ಟಿಯಿಂದ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದಾರೆ.

ಅಚ್ಯುತಾನಂದನ್ ಅವರು ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಆಯೋಗದ ಚಟುವಟಿಕೆಗಳ ಮೇಲೆ ಭಾರೀ ಪರಿಣಾಮಬೀರಿತ್ತು.  ಮೆದುಳು ರಕ್ತಸ್ರಾವದ ನಂತರ ಕಳೆದ ಅಕ್ಟೋಬರ್ ನಲ್ಲಿ 97ನೇ ವರ್ಷಕ್ಕೆ ಕಾಲಿಟ್ಟ ಅನುಭವಿ ನಾಯಕನಿಗೆ ಸಂಪೂರ್ಣ ವಿಶ್ರಾಂತಿ ಹಾಗೂ ನಿರಂತರ ವೈದ್ಯಕೀಯ ಆರೈಕೆಯನ್ನು ವೈದ್ಯರು ಶಿಫಾರಸು ಮಾಡಿದ್ದರು.

ನಾನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ರಾಜೀನಾಮೆ ಸಲ್ಲಿಸಿದ್ದು, ಅನಾರೋಗ್ಯದಿಂದಾಗಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಅಚ್ಯುತಾನಂದನ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News