ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ನ್ಯಾಯ ಸಿಗಲಿಲ್ಲ: ಸಿ.ಎಂ.ಇಬ್ರಾಹಿಂ

Update: 2021-01-31 13:54 GMT

ರಾಯಚೂರು, ಜ.31: ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಮರಿಗೆ ನ್ಯಾಯ ಸಿಗಲಿಲ್ಲ. ಅವರು ಅಲ್ಪಸಂಖ್ಯಾತ ನಾಯಕರನ್ನು ಬೆಳೆಸಿಲ್ಲ. ಆದರೆ, ಅಲ್ಪಸಂಖ್ಯಾತರ ಮತ ಮಾತ್ರ ಅವರಿಗೆ ಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನ್ಯಾಯ ಸಿಗಲಿಲ್ಲ. ಅಲ್ಪಸಂಖ್ಯಾತರನ್ನು ಸಭಾಧ್ಯಕ್ಷರನ್ನಾಗಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸದ್ಯ ನಾನು ಕಾಂಗ್ರೆಸ್‍ನಿಂದ ದೂರವಾಗಿಲ್ಲ. ಜೆಡಿಎಸ್ ಸಹ ಸೇರಿಲ್ಲ. ಅಭಿಪ್ರಾಯ ಸಂಗ್ರಹಿಸಿ ಮಾರ್ಚ್ ನಲ್ಲಿ ನಿರ್ಧರಿಸುತ್ತೇನೆ ಎಂದ ಅವರು, ನಾನು ಒಂದೇ ಸಮಾಜದೊಂದಿಗೆ ಪಕ್ಷ ಸಂಘಟನೆ ಮಾಡುವುದಿಲ್ಲ. ಎಲ್ಲ ಸಮಾಜಗಳೊಂದಿಗೆ ಪಕ್ಷ ನಡೆಸುವ ಉದ್ದೇಶ ಹೊಂದಿದ್ದೇನೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News