ರಾಜ್ಯದ 26 ಸಂಸದರು ಮಂಗಳಮುಖಿಯರು ಎಂದ ಸಿಎಂ ಇಬ್ರಾಹಿಂ
Update: 2021-01-31 15:54 GMT
ವಿಜಯಪುರ, ಜ.31: ರಾಜ್ಯದ 26 ಸಂಸದರು ಮಂಗಳಮುಖಿಯರು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯದ 26 ಸಂಸದರು ಮಂಗಳಮುಖಿಯರು. ಅವರಿಗೆ ಪ್ರಧಾನಿ ಮೋದಿಯನ್ನು ಪ್ರಶ್ನಿಸುವ ತಾಕತ್ತು ಇಲ್ಲ. ರಾಜ್ಯದ ಜಿಎಸ್ಟಿ ಪಾಲು ಕೇಳುವ ಧೈರ್ಯ ಯಾವೊಬ್ಬ ಸಂಸದರೂ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
30 ಸಾವಿರ ಕೋಟಿ ರೂ. ಜಿಎಸ್ಟಿ ಪಾಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಿದೆ. ಅವಕಾಶ ಸಿಕ್ಕರೂ ತೆರಿಗೆ ಸಂಗ್ರಹಿಸುವ ಕೆಲಸ ಸಿಎಂ ಯಡಿಯೂರಪ್ಪ ಮಾಡುತ್ತಿಲ್ಲ. ಯಡಿಯೂರಪ್ಪ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದರು.