ಶಿವಮೊಗ್ಗ: ಬಸ್‌ಗೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು

Update: 2021-02-01 13:08 GMT

ಶಿವಮೊಗ್ಗ, ಫೆ.01: ಕಾರನ್ನು ಹಿಂದಿಕ್ಕಲು ಹೋಗಿ ಬೈಕೊಂದು ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಮತ್ತು ಯುವತಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಸಮೀಪದ ಮೇಲಿನ ಹನಸವಾಡಿಯಲ್ಲಿ ನಡೆದಿದೆ.

ಹೊನ್ನಾಳಿ ತಾಲೂಕು ಬಾಗೋಡಿ ಗ್ರಾಮದ ರಘು ಮತ್ತು ಸುಮ ಮೃತಪಟ್ಟವರು. ಕಾರನ್ನು ಹಿಂದಿಕ್ಕಿ ಮುಂದೆ ಸಾಗುವಾಗ ಬೈಕ್ ದಾವಣಗೆರೆಗೆ ಹೋಗುತ್ತಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಹಾಗೂ ಕೆಎಸ್ ಆರ್ಟಿಸಿ ಡಿಪೋ ಮ್ಯಾನೇಜರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News