ಗುರುಪುರ-ಕೈಕಂಬದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಭಿನಂದನೆ

Update: 2021-02-02 16:50 GMT

ಗುರುಪುರ, ಫೆ.2: ಕೋಮುವಾದಕ್ಕೆ ಪ್ರಚೋದನೆ ನೀಡುವ ಬಿಜೆಪಿ ಮತ್ತು ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅಲ್ಪಸಂಖ್ಯಾತರ ಮತ ಒಡೆಯುವ ಎಸ್‌ಡಿಪಿಐ ವಿಷಯದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸುವೆ ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ತಿಳಿಸಿದರು.

ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಗುರುಪುರ ಕೈಕಂಬದಲ್ಲಿ ಬ್ಲಾಕ್ ವ್ಯಾಪ್ತಿಯ ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆದ್ದಿರುವ ಸದಸ್ಯರಿಗೆ ಆಯೋಜಿಸಿದ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗುರುಪುರ ಗ್ರಾಪಂನ 8, ಅಡ್ಯಾರ್ 13, ಗಂಜಿಮಠದ 7, ಕಂದಾವರದ 5, ಪಡುಪೆರಾರದ ಮೂವರು, ಮುತ್ತೂರು 2, ಮಲ್ಲೂರು, ನೀರುಮಾರ್ಗ ಮತ್ತು ಉಳಾಯಿಬೆಟ್ಟಿನ ತಲಾ ಒಬ್ಬರು ಒಬ್ಬರು ಸದಸ್ಯರನ್ನು ಶಾಲು ಹಾಕಿ ಅಭಿನಂದಿಸಲಾಯಿತು.

ಬ್ಲಾಕ್ ಸಮಿತಿ ಅಧ್ಯಕ್ಷ ಸುರೇಂದ್ರ ಕಾಂಬ್ಳಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮಾಜಿ ಶಾಸಕ ಮೊಯ್ದಿನ್ ಬಾವಾ, ಜಿಪಂ ಸದಸ್ಯ ಯು ಪಿ ಇಬ್ರಾಹಿಂ, ಸೆಲಿನಾ ಫೆರ್ನಾಂಡಿಸ್, ಮನಪಾ ಕಾರ್ಪೊರೇಟರ್ ನವೀನ್ ಡಿಸೋಜ, ಗುರುಪುರ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪುರುಷೋತ್ತಮ ಮಲ್ಲಿ, ಹರೀಶ್ ಭಂಡಾರಿ, ಸಚಿನ್ ಅಡಪ, ಸದಾಶಿವ ಶೆಟ್ಟಿ ಕೆ, ಸೆಲಿನಾ ಫೆರ್ನಾಂಡಿಸ್, ಝಾಕಿರ್ ಆರ್.ಎಸ್, ಸುನಿಲ್ ಪೂಜಾರಿ, ವಿಜಯಾ ಜಿ.ಸುವರ್ಣ, ದಾವೂದ್, ಉಮೈಭಾನು ಮತ್ತಿತರರು ಉಪಸ್ಥಿತರಿದ್ದರು.

ಬಾಷಾ ಮಾಸ್ಟರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News