ಚಿತ್ರಮಂದಿರಗಳಿಗೆ ವಿಧಿಸಿರುವ ಷರತ್ತು ಸಡಿಲಗೊಳಿಸುವಂತೆ ಆಗ್ರಹಿಸಿ ಧರಣಿ

Update: 2021-02-04 14:22 GMT

ಬೆಂಗಳೂರು, ಫೆ.4: ರಾಜ್ಯ ವ್ಯಾಪಿಯ ಚಿತ್ರಮಂದಿರಗಳಲ್ಲಿ ವಿಧಿಸಿರುವ ಷರತ್ತುಗಳನ್ನು ಸಡಿಲ ಮಾಡಿ ಎಂದಿನಂತೆ ಮುಕ್ತ ಅವಕಾಶ ನೀಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಧರಣಿ ನಡೆಸಿದರು.

ಗುರುವಾರ ನಗರದ ಸಂತೋಷ್ ಚಿತ್ರಮಂದಿರದ ಬಳಿ ಧರಣಿ ನಡೆಸಿದ ಅವರು, ಚಿತ್ರಮಂದಿರಗಳಲ್ಲಿ ಶೇಕಡ 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಬೇಕೆಂದು ಕೇಂದ್ರ ಸರಕಾರ ಅನುಮತಿ ನೀಡಿದ್ದರೂ ರಾಜ್ಯ ಸರಕಾರ ಕಠಿಣ ಷರತ್ತುಗಳನ್ನು ವಿಧಿಸಿ ನೀಡಿರುವ ಅನುಮತಿ ಕನ್ನಡ ಚಿತ್ರರಂಗದ ಮೇಲೆ ಗದಾಪ್ರಹಾರ ಮಾಡಿದಂತಾಗಿದೆ ಎಂದು ದೂರಿದರು.

ರಾಜ್ಯ ಸರಕಾರ ಸಾರ್ವಜನಿಕರಲ್ಲಿ ಭಯಭೀತಿ ಹುಟ್ಟಿಸುವಂತಹ ನಿಯಮಗಳನ್ನು ಕೈಬಿಡಬೇಕು. ಕನ್ನಡ ಚಿತ್ರಗಳನ್ನು ನೋಡಲು ಚಿತ್ರಮಂದಿರಗಳಿಗೆ ಜನರು ಬರುವಂತೆ ಮುಕ್ತ ಅವಕಾಶ ನೀಡಬೇಕು. ವಿಧಿಸಿರುವ ಎಲ್ಲ ಷರತ್ತುಗಳನ್ನು ಸಡಿಲಗೊಳಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News