ಹಿರಿಯ ಕೆಎಎಸ್ ಅಧಿಕಾರಿ ಮಹಮ್ಮದ್ ಗೌಸ್ ನಿಧನ

Update: 2021-02-05 18:16 GMT

ಚಾಮರಾಜನಗರ: ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಹಿರಿಯ ಕೆಎಎಸ್ ಅಧಿಕಾರಿ ಮಹಮ್ಮದ್ ಗೌಸ್ ರವರು ಬೆಂಗಳೂರಿನ ಆರ್.ಟಿ ನಗರದಲ್ಲಿ ನಿಧನರಾದರು.

ಮಹಮದ್ ಗೌಸ್ ರವರು ಮೈಸೂರು ಜಿಲ್ಲೆಯ ನಂಜನಗೂಡು ಉಪ ವಿಭಾಗಾಧಿಕಾರಿಯಾಗಿ, ಆಹಾರ ಇಲಾಖೆಯ ಉಪ ನಿರ್ದೇಶಕರಾಗಿ, ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿದ್ದರು.

ಕೋಲಾರ ಜಿಲ್ಲಾ ಪಂಚಾಯತ್ ನಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮಹಮ್ಮದ್ ಗೌಸ್ ರವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News