ಗೌರಿ, ಕಲಬುರ್ಗಿಯಂತೆ ಕೊಲೆ ಮಾಡುವುದಾಗಿ ಭಗವಾನ್‍ಗೆ ಬೆದರಿಕೆ ಹಾಕಿದ್ದ ಮೀರಾ ?

Update: 2021-02-07 15:22 GMT

ಬೆಂಗಳೂರು, ಫೆ.7: ಸಾಹಿತಿ, ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧ ಇಲ್ಲಿನ ಹಲಸೂರು ಗೇಟ್ ಠಾಣಾ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಆರೋಪಿ ಮೀರಾ ರಾಘವೇಂದ್ರ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್, ವಿಚಾರವಾದಿ, ಸಂಶೋಧಕ ಎಂ.ಎಂ.ಕಲಬುರ್ಗಿ ಅವರಂತೆ ಕಗ್ಗೊಲೆ ಮಾಡುವುದಾಗಿ ಭಗವಾನ್ ಅವರಿಗೆ ಬೆದರಿಕೆ ಹಾಕಿದ್ದಳು ಎನ್ನುವ ಅಂಶವನ್ನು ಉಲ್ಲೇಖಿಸಲಾಗಿದೆ.

ವಕೀಲೆ ಮೀರಾ ಕೃತ್ಯಕ್ಕೆ ಸಹಕಾರ ನೀಡಿದ ಆರೋಪದಡಿ ಆಕೆಯ ಪತಿ ರಾಘವೇಂದ್ರ ವಿರುದ್ಧವೂ ಒಳಗೊಂಡತೆ ಐಪಿಸಿ ಸೆಕ್ಷನ್ 506, 341, 34 ಹಾಗೂ 504ರಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮೈಸೂರಿಗೆ ಹೋಗುವಷ್ಟರಲ್ಲಿ ನಮ್ಮ ಹುಡುಗರು ನಿನ್ನನ್ನು ಕೊಲ್ಲಲಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್, ಡಾ.ಎಂ.ಎಂ.ಕಲಬುರ್ಗಿ ಜೊತೆಗೆ ನಿನ್ನನ್ನೂ ಕಳುಹಿಸುತ್ತೇವೆ ಸೇರಿದಂತೆ ಇನ್ನಿತರೆ ಅವಾಚ್ಯ ಶಬ್ದಗಳಿಂದ ಆರೋಪಿ ಮೀರಾ, ಪ್ರೊ.ಕೆ.ಎಸ್.ಭಗವಾನ್‍ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಎಫ್‍ಐಆರ್ ಪ್ರತಿಯಲ್ಲಿ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News