ಬಾವಿಗೆ ಹಾರಿ ಯುವಕ ಆತ್ಮಹತ್ಯೆ

Update: 2021-02-07 15:43 GMT

ಗಂಗೊಳ್ಳಿ, ಫೆ.7: ಲಾಕ್‌ಡೌನ್ ನಂತರ ವರ್ಕ್ ಫ್ರಂ ಹೋಮ್‌ನಲ್ಲಿದ್ದ ಯುವಕನೋರ್ವ ಆರ್ಥಿಕ ಸಮಸ್ಯೆಯಿಂದ ಮರಣ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗಂಗೊಳ್ಳಿ ಸಮೀಪದ ಗುಜ್ಜಾಡಿ ಎಂಬಲ್ಲಿ ನಡೆದಿದೆ.

ಮೃತರನ್ನು ಗುಜ್ಜಾಡಿ ನಾಯಕವಾಡಿ ಹೊಸಮನೆ ನಿವಾಸಿ ಸಚಿನ್(24) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಆರ್ಥಿಕ ಸಮಸ್ಯೆಗೆ ತುತ್ತಾಗಿದ್ದರೆನ್ನಲಾಗಿದೆ. ಇದೇ ಚಿಂತೆ ಯಲ್ಲಿ ಮನನೊಂದ ಸಚಿನ್, ನನ್ನ ಸಾವಿಗೆ ನಾನೇ ಕಾರಣ ಎಂದು ಮರಣ ಪತ್ರ ಬರೆದಿಟ್ಟು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News