ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್: ದಿನಗೂಲಿ ಕಾರ್ಮಿಕ ಮೃತ್ಯು

Update: 2021-02-07 17:00 GMT

ಕೋಲಾರ, ಫೆ.7: ದಿನಗೂಲಿ ಕಾರ್ಮಿಕರೊಬ್ಬರು ಶಾರ್ಟ್ ಸರ್ಕ್ಯೂಟ್ ನಿಂದ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬಿ.ಇ.ಎಂ.ಎಲ್. ಕಾರ್ಖಾನೆಯಲ್ಲಿ ಇಂದು ನಡೆದಿದೆ.

ಮೃತರನ್ನು ಶ್ರೀಧರ್ (40) ಎಂದು ಗುರುತಿಸಲಾಗಿದೆ. ಇವರು ಕೆ.ಜಿ.ಎಫ್.ನ ಅಶೋಕ ನಗರದ ನಿವಾಸಿಯಾಗಿದ್ದು, ಇಂದು ಕಾರ್ಖಾನೆಯಲ್ಲಿ ಕರ್ತವ್ಯದಲ್ಲಿದ್ದಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟಿದ್ದಾರೆ.

ಬೆಮಲ್ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಮೆಲ್ ಕಾರ್ಖಾನೆ ಎದುರು ಕಂಪನಿ ಕಾರ್ಮಿಕರು ಹಾಗೂ ಸಂಬಂದಿಕರು ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದರು. ಮೃತರ ಕುಟುಂಬದವರ ಆಕ್ರಂಧನ ಮುಗಿಲು ಮುಟ್ಟಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News