ಉದ್ಯಮಿ ಕೆ.ರವೀಂದ್ರ ಬಾರಿತ್ತಾಯ
Update: 2021-02-10 04:07 GMT
ಉಡುಪಿ, ಫೆ.10: ಉಡುಪಿ ಶಾಸಕ ಕೆ ರಘುಪತಿ ಭಟ್ ಅವರ ಸಹೋದರ, ಸಾಂಗ್ಲಿಯ ಹೋಟೆಲ್ ಉದ್ಯಮಿ ಕೆ.ರವೀಂದ್ರ ಬಾರಿತ್ತಾಯ( 60) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಸುಕಿನ ಮುಂಜಾನೆ ಸಾಂಗ್ಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ತಾಯಿ, ಮೂವರು ಸಹೋದರರು, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ .
ರವೀಂದ್ರ ಬಾರಿತ್ತಾಯರ ನಿಧನಕ್ಕೆ ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ , ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ , ಕರಂಬಳ್ಳಿ ಫ್ರೆಂಡ್ಸ್, ವೇಂಕಟರಮಣ ಭಜನಾ ಮಂಡಳಿಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ .