ಬೆಂಕಿ ಅಕಸ್ಮಿಕ: ಗಾಯಾಳು ಮಹಿಳೆ ಮೃತ್ಯು

Update: 2021-02-13 17:31 GMT

ಶಂಕರನಾರಾಯಣ, ಫೆ.13: ಬೆಂಕಿ ಅಕಸ್ಮಿಕದಿಂದ ಗಂಭೀರವಾಗಿ ಗಾಯ ಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಮಂಜಿ ಕುಲಾಲ್ತಿ (80) ಎಂದು ಗುರುತಿಸಲಾಗಿದೆ. ಇವರು ಫೆ.10ರಂದು ಬೆಳಗ್ಗೆ ಮನೆಯಲ್ಲಿ ಅಡುಗೆ ಮಾಡಲು ಸೀಮೆಎಣ್ಣೆಯನ್ನು ಒಲೆಗೆ ಉಪಯೋಗಿಸುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ಅವರ ದೇಹದ ಬಹುಪಾಲು ಸುಟ್ಟು ಹೋಗಿ ಗಂಭೀರ ಗಾಯಗೊಂಡಿದ್ದರು.

ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಫೆ.12ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News