ರೈತರನ್ನು ಬೆಂಬಲಿಸುವುದು ದೇಶದ್ರೋಹ ಪ್ರಕರಣವಾಗುವುದು ಹೇಗೆ: ಸಿದ್ದರಾಮಯ್ಯ ಪ್ರಶ್ನೆ

Update: 2021-02-15 06:42 GMT

ಬೆಂಗಳೂರು, ಫೆ.15: ಹವಾಮಾನ ಹೋರಾಟಗಾರ್ತಿ ದಿಶಾ ರವಿ ಅವರನ್ನು ರೈತರ ಹೋರಾಟದ ಟೂಲ್‍ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ರಾಜಕೀಯ ಪ್ರೇರಿತ ಈ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹವಾಮಾನ ಹೋರಾಟಗಾರ್ತಿ ದಿಶಾ ರವಿ ಅವರ ಬಂಧನವು ನರೇಂದ್ರ ಮೋದಿ ಸರಕಾರದಲ್ಲಿ ಪ್ರಜಾಪ್ರಭುತ್ವದಲ್ಲಿನ ಒಡಕುಗಳನ್ನು ಬಹಿರಂಗಪಡಿಸಿದೆ ಎಂದು ಟೀಕಿಸಿದ್ದಾರೆ.

ರೈತರನ್ನು ಬೆಂಬಲಿಸುವುದು ದೇಶದ್ರೋಹದ ಪ್ರಕರಣ ಆಗುವುದು ಹೇಗೆ ಎಂದು ಪ್ರಶ್ನಿಸಿರುವ ಅವರು, ದೆಹಲಿ ಪೊಲೀಸರ ರಾಜಕೀಯ ಪ್ರೇರಿತ ಈ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News