ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ದರ್ಶನ್ ರನ್ನು ನೇಮಿಸಿದ ರಾಜ್ಯ ಸರಕಾರ
Update: 2021-02-15 07:40 GMT
ಬೆಂಗಳೂರು, ಫೆ.15: ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಖ್ಯಾತ ನಟ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ರಾಜ್ಯ ಸರಕಾರ ನೇಮಿಸಿದೆ.
ನಟ ದರ್ಶನ್ ಅವರು ಯಾವುದೇ ಸಂಭಾವನೆ ಇಲ್ಲದೇ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.