×
Ad

ಫೆ.21: ವಿಶ್ವ ಸ್ಥಳೀಯ ಭಾಷಾ ದಿನಾಚರಣೆ

Update: 2021-02-16 19:32 IST

ಮಂಗಳೂರು, ಫೆ.16: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಜಂಟಿ ಆಶ್ರಯದಲ್ಲಿ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಫೆ.21ರಂದು ಅಪರಾಹ್ನ 3 ಗಂಟೆಗೆ ವಿಶ್ವ ಸ್ಥಳೀಯ ಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಿರೀಶ್ ಭಟ್ ಅಜಕ್ಕಳ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ. ಹಾಗೂ ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕಿ ಡಾ. ನಾಗರತ್ನ ಕೆ.ಎ.ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರಾದ ಪುಷ್ಕಳ ಕುಮಾರ್ (ಕನ್ನಡ), ,ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ತುಳು ವಿಭಾಗದ ನಿವೃತ್ತ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕಣ್ವತೀರ್ಥ (ತುಳು), ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಂಯೋಜಕ ಡಾ. ದೇವದಾಸ್ ಪೈ (ಕೊಂಕಣಿ), ಸಾಹಿತಿ ಅಬ್ದುರ್ರಹ್ಮಾನ್ ಕುತ್ತೆತ್ತೂರು (ಬ್ಯಾರಿ), ಮಂಗಳೂರು ವಿವಿ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕಿ ಡಾ. ಮೀನಾಕ್ಷಿ ಎಂ.ಎಂ. (ಕೊಡವ), ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ (ಅರೆಭಾಷೆ), ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ತುಳು ವಿಭಾಗದ ಅತಿಥಿ ಉಪನ್ಯಾಸಕ ಶ್ಯಾಮ್ ಪ್ರಸಾದ್ (ಹವ್ಯಕ), ನಿವೃತ್ತ ಶಿಕ್ಷಕಿ ಸುಮಿತ್ರಾ ಜಿ. ಅಚಾರ್ಯ (ಶಿವಳ್ಳಿ), ಬಿ ಮೂಡ ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ (ಮಲಾಮೆ), ಮಂಗಳೂರು ವಿವಿ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ದಿನಕರ ಕೆಂಜೂರು (ಕೊರಗ), ಕಿನ್ಯದ ಶ್ರೀ ಶಾರದಾ ವಿದ್ಯಾನಿಕೇತನ ಪದವಿ ಕಾಲೇಜಿನ ಉಪನ್ಯಾಸಕ ಅರುಣ್ ಉಳ್ಳಾಲ್ (ತೀಯಾ), ಸೋಮೇಶ್ವರ ಉಚ್ಚಿಲದ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಚಂಚಲಾಕ್ಷಿ (ಮೋಯಾ), ಪಿ.ಎ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮುಹಮ್ಮದ್ ಅವ್ವಾದ್ (ನವಾಯತಿ), ಯಕ್ಷಗಾನ ಕಲಾವಿದ ಗಿರೀಶ್ ಐತಾಳ್ ಕರಂಬಳ್ಳಿ (ಕುಂದಾಪುರ ಕನ್ನಡ), ಮಂಗಳೂರು ವಿವಿ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೀತಿ ಕೀರ್ತಿ ಡಿಸೋಜ (ಕ್ರಿಶ್ಚಿಯನ್ ಕೊಂಕಣಿ), ಪಿ.ಎ ಕಾಲೇಜಿನ ಎೆಂಬಿಎ ವಿಭಾಗದ ನಿರ್ದೇಶಕ ಡಾ. ಸೈಯದ್ ಅಮೀನ್ (ಉರ್ದು) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಹಾಗೂ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News