ಭಾಸ್ಕರ್ ರಾವ್ ಸೇರಿ ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ
Update: 2021-02-16 14:15 GMT
ಬೆಂಗಳೂರು, ಫೆ.16: ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿದ್ದ ಭಾಸ್ಕರ್ ರಾವ್ ಸೇರಿದಂತೆ ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಭಾಸ್ಕರ್ ರಾವ್ ಅವರನ್ನು ರೈಲ್ವೇ ಇಲಾಖೆಯ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಎ.ಜೆ.ಚಕ್ರವರ್ತಿ ಅವರನ್ನು ನಿಯೋಜಿಸಲಾಗಿದೆ.
ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ಲೋಕಾಯುಕ್ತ ಎಡಿಜಿಪಿ ಸ್ಥಾನಕ್ಕೆ, ಡಾ.ಎ.ಎಸ್.ಮೂರ್ತಿ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮಕ್ಕೆ ಎಡಿಜಿಪಿ ಹಾಗೂ ನಿರ್ದೇಶಕರಾಗಿ ನೇಮಿಸಲಾಗಿದೆ. ಡಾ.ಕೆ.ರಾಮಚಂದ್ರರಾವ್ ಅವರನ್ನು ಬಿಎಂಟಿಎಫ್ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.