×
Ad

ಫೆ.20: ದ.ಕ. ಜಿಲ್ಲಾಧಿಕಾರಿಯಿಂದ ಗ್ರಾಮ ವಾಸ್ತವ್ಯ

Update: 2021-02-16 21:33 IST

ಮಂಗಳೂರು, ಫೆ.16: ದ.ಕ. ಜಿಲ್ಲೆಯ ಜನತೆಯ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಬಗೆಹರಿಸಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿರ್ಧರಿಸಿದ್ದಾರೆ.

ಇದೇ ಫೆ.20ರಂದು ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಶಿಶಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾಧಿಕಾರಿ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬೆಳ್ತಂಗಡಿ ತಾಲೂಕು ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ.

ಕಂದಾಯಾಧಿಕಾರಿಗಳಿಗೆ ಗ್ರಾಮ ವಾಸ್ತವ್ಯ ಕಡ್ಡಾಯ: ಸರಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಸರಕಾರದ ಆಶಯದಂತೆ ಜಿಲ್ಲೆಯ ಎಲ್ಲ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News