ಭಿಕ್ಷುಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ: ನಾಲ್ವರು ಆರೋಪಿಗಳ ಬಂಧನ

Update: 2021-02-17 16:22 GMT

ಮೈಸೂರು,ಫೆ.17: ಭಿಕ್ಷುಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಫೀಕ್, ಮಂಜುನಾಥ್, ಕೃಷ್ಣ ಮನು, ರೇವಣ್ಣ ಬಂಧಿತ ಆರೋಪಿಗಳು. ಬಂಧಿತರೆಲ್ಲಾ ಕೂಲಿ ಕಾರ್ಮಿಕರಾಗಿದ್ದಾರೆ.

ಮೃತ ಮಹಿಳೆ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಳು. ಮೈಸೂರಿನ ಕೆ.ಟಿ. ಸ್ಟ್ರೀಟ್ ಬಳಿ ಫೆ.1ರ ರಾತ್ರಿ ಭಿಕ್ಷುಕಿಗೆ ಮದ್ಯ ಕುಡಿಸಿ ನಂತರ ಆಕೆಯ ಅತ್ಯಾಚಾರ ಎಸಗಿದ್ದರು. ಬಳಿಕ ಸಂತ್ರಸ್ತೆಯನ್ನು ಅಮಾನುಷವಾಗಿ ಕೊಲೆ ಮಾಡಿದ್ದರು. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯದ ಆಧಾರದ ಮೇಲೆ ನಾಲ್ವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ತಪ್ಪಿಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣ ಸಂಬಂಧ ಲಷ್ಕರ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 376ರಡಿ ಸುಮೊಟೋ ಕೇಸ್ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News