ಉಪಚುನಾವಣೆ: ಬೆಳಗಾವಿ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಪ್ರಮೋದ್ ಮುತಾಲಿಕ್ ಮನವಿ

Update: 2021-02-19 11:42 GMT

ಬೆಂಗಳೂರು, ಫೆ.19: ಲೋಕಸಭಾ ಉಪಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ತಮಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮನವಿ ಸಲ್ಲಿಸಿದ್ದಾರೆ.

ನಗರದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿರುವ ಪ್ರಮೋದ್ ಮುತಾಲಿಕ್, ಬೆಳಗಾವಿ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ತಮಗೆ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ. ಹಲವು ವರ್ಷಗಳಿಂದ ಸೈದ್ಧಾಂತಿಕ ವಿಚಾರಗಳ ಮೇಲೆಯೇ ಹೋರಾಟ ನಡೆಸಿದ್ದು, ಇದರ ಉಳಿವಿಗಾಗಿ ಟಿಕೆಟ್ ನೀಡಿ ಸಹಕರಿಸುವಂತೆ ಮುತಾಲಿಕ್ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ರಾಜ್ಯ ಕಾರ್ಯದರ್ಶಿ ಎಂ. ಎಸ್.ಹರೀಶ್,  ಬೆಂಗಳೂರು ಮಹಾನಗರದ ಸಂಘಟನಾ ಕಾರ್ಯದರ್ಶಿ ಅಮರ್‍ನಾಥ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News