ರೈತ ಸಂತೆಯ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ: ಕೃಷಿಕರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಕಿವಿಮಾತು
ಉಡುಪಿ, ಫೆ.19: ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ರೈತ ಸೇವಾ ಕೇಂದ್ರದ ಆವರಣದಲ್ಲಿ ಪ್ರತಿ ಗುರುವಾರ ರೈತ ಸಂತೆಯನ್ನು ನಡೆಸುವ ಮೂಲಕ ರೈತರಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ, ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಹಾಗೂ ಗ್ರಾಹಕರಿಗೆ ತಾಜಾ ತರ ಕಾರಿ ಮತ್ತು ಇತರೇ ಪದಾರ್ಥಗಳನ್ನು ರೈತ ಸಂತೆಯ ಮೂಲಕ ಪೂರೈಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ.
ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ರೈತ ಸಂತೆಯಲ್ಲಿ ಭಾಗವಹಿಸುವ ರೈತರಿಗೆ ಇಲಾಖೆ ವತಿಯಿಂದ ಗುರುತಿನ ಚೀಟಿಗಳನ್ನು ನೀಡುವಂತೆ ಸೂಚಿಸಿದ ಅವರು, ಆಸಕ್ತಿಯುಳ್ಳ ರೈತರು ರೈತ ಸಂತೆಯಲ್ಲಿ ಭಾಗವಹಿಸಲು ಸಲ್ಲಿಸಿರುವ ಅರ್ಜಿಗಳನ್ನು ಸ್ವೀಕರಿಸುವಂತೆ ತೋಟಗಾರಿಕಾ ಉಪನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯರು, ಮಳಿಗೆ ದಾರರು, ಬೆನಗಲ್ ತರಕಾರಿ ಬೆಳೆಗಾರರ ಸೌಹಾರ್ದ ಸೊಸೈಟಿಯ ಕಾರ್ಯದರ್ಶಿ ಹಾಗೂ ಇತರರು ಉಪಸ್ಥಿತರಿದ್ದರು.