ಪ್ರಪಾತಕ್ಕೆ ಉರುಳಿದ ಕಾರು: ಇಬ್ಬರಿಗೆ ಗಾಯ

Update: 2021-02-20 13:17 GMT

ಬಂಟ್ವಾಳ, ಫೆ.20: ಕಾರೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. 

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದು ಬುಡೋಳಿ ಸಮೀಪ ಇರುವ ಅಪಾಯಕಾರಿ ಹೊಂಡಕ್ಕೆ ಉರುಳಿ ಬಿದ್ದಿದೆ. 

ಬುಡೋಳಿ ಯೂತ್ ಫೇಡರೇಶನ್ ಸದಸ್ಯರು ಮತ್ತು ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಸದಸ್ಯರು ಕಾರ್ಯಾಚರಣೆ ನಡೆಸಿ ಕಾರಿನೊಳಗಡೆ ಸಿಕ್ಕಿಹಾಕಿಕೊಂಡಿರುವ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ. 

ಕಳೆದ ಕೆಲವು ದಿನಗಳಿಂದ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News