ನೆರೆ ರಾಜ್ಯಗಳಲ್ಲಿ ಕೊರೋನ ಉಲ್ಬಣ: ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಗೆ ಡಿಸಿಎಂ ಕಾರಜೋಳ ಸೂಚನೆ

Update: 2021-02-20 13:21 GMT

ಬೆಂಗಳೂರು, ಫೆ.20: ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲಿ ಕೊರೋನ ರೋಗವು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ತೀವ್ರಗೊಳಿಸುವಂತೆ ಕೋರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮುಖ್ಯಕಾರ್ಯದರ್ಶಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪತ್ರ ಬರೆದಿದ್ದಾರೆ.

ನೆರೆ ರಾಜ್ಯಗಳಲ್ಲಿ ಕೊರೋನ ಉಲ್ಬಣವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಅನೇಕ ತಾಲೂಕುಗಳು ನೆರೆ ರಾಜ್ಯಗಳಿಗೆ ಹೊಂದಿಕೊಂಡಿವೆ. ಸಾರ್ವಜನಿಕರು, ಕೂಲಿ ನಾಲಿ ಮಾಡುವ ಜನರು ನೆರೆ ರಾಜ್ಯಗಳಿಗೆ ಪ್ರತಿನಿತ್ಯ ಸಂಚರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಕೊರೋನ ಸೊಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೋನ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೊಳಪಡಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಆದೇಶಿಸುವಂತೆ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News