ಸ್ಥಿರತೆಯಿಲ್ಲದೆ ಮಾತನಾಡುವ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕೆ

Update: 2021-02-20 13:22 GMT

ಬೆಂಗಳೂರು, ಫೆ.20: ಸಿದ್ದರಾಮಯ್ಯನವರೇ, ದೇಶದ ನ್ಯಾಯಾಂಗ ವ್ಯವಸ್ಥೆಯ ಆಧಾರದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ರಾಮಮಂದಿರ ನಿರ್ಮಾಣ ಮಾಡುತ್ತಿರುವುದು ಯಾವುದೇ ಪಕ್ಷ, ಸಂಘಟನೆಗಳಲ್ಲ. ನ್ಯಾಯಾಲಯವೇ ಸೂಚಿಸಿದ ಟ್ರಸ್ಟ್ ಮುಖೇನ ರಾಮಮಂದಿರ ನಿರ್ಮಾಣವಾಗುತ್ತಿದೆ. ರಾಜಕೀಯ ಲಾಭ ಪಡೆಯುತ್ತಿರುವುದು ನಿಮ್ಮಂತವರೇ ಹೊರತು ಬೇರಾರಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.

ಸಿದ್ದರಾಮಯ್ಯನವರೇ, ನ್ಯಾಯಾಲಯ ತೀರ್ಪು ನೀಡಿದ ಮೇಲೂ, ವಿವಾದಿತ ಜಾಗವೆನ್ನುವ ಮೂಲಕ ನಿಮ್ಮ ಅಲ್ಪ ಜ್ಞಾನವನ್ನು ಪ್ರದರ್ಶಿಸಿದ್ದೀರಿ. ನಿಮ್ಮ ನಾಲಿಗೆಯನ್ನು ನಿಯಂತ್ರಿಸಿಕೊಳ್ಳಿ. ಸ್ಥಿರತೆಯಿಲ್ಲದೆ ಮಾತನಾಡುವ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ. ರಾಮಮಂದಿರಕ್ಕೆ ವಿರೋಧಿಸಿದ್ದ ನೀವು ಈಗ ಶ್ರದ್ಧೆ, ನಂಬಿಕೆ ಎಂದು ಊಸರವಳ್ಳಿಯಂತೆ ನಟಿಸುತ್ತಿದ್ದೀರಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News