ಫೆ.22ರಂದು ಪರ್ಕಳಕ್ಕೆ ಸಿದ್ದರಾಮಯ್ಯ ಭೇಟಿ

Update: 2021-02-21 15:43 GMT

ಉಡುಪಿ, ಫೆ.21: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆ.22ರಂದು ಮಧ್ಯಾಹ್ನ ಪರ್ಕಳ ಸ್ವಾಗತ್ ಹೋಟೆಲ್ ಬಳಿಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಗೆ ಸಮಾಲೋಚನೆ ನಡೆಸಲಿದ್ದಾರೆ.

2013ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಪ್ರಾರ್ಥಿಸಿ 108 ತೆಂಗಿನ ಕಾಯಿಗಳನ್ನು ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಒಡೆದು ಪ್ರಾರ್ಥಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಅವರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಮೋಹನದಾಸ್ ನಾಯಕ್, ಗಣೇಶ್‌ರಾಜ್ ಸರಳೇಬೆಟ್ಟು, ಜಯ ಶೆಟ್ಟಿ ಬನ್ನಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News