ಶಿವಮೊಗ್ಗ: ಕದ್ದ ಮೊಬೈಲ್‍ ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್ ಬಲೆಗೆ

Update: 2021-02-22 07:41 GMT

ಶಿವಮೊಗ್ಗ: ಕದ್ದ ಮೊಬೈಲ್‍ಗಳನ್ನು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಆರು ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗದ ಹೊಸಮನೆ ಬಡಾವಣೆಯ ವಿಶಾಲ್ (18) ಬಂಧಿತ ಆರೋಪಿ. ಭದ್ರಾವತಿ, ಶಿವಮೊಗ್ಗದ ವಿವಿಧೆಡೆ ಮೊಬೈಲ್‍ ಕಳ್ಳತನ ಮಾಡಿದ್ದು, ಅವುಗಳನ್ನು ಮಾರಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ, ವಿಶಾಲ್‍ನನ್ನು ಬಂಧಿಸಿದ್ದಾರೆ.

ಖಾಸಗಿ ಬಸ್ ನಿಲ್ದಾಣದ ಹಿಂಭಾಗದ ಇಂದಿರಾ ಕ್ಯಾಂಟೀನ್ ಬಳಿ ಮೊಬೈಲ್‍ಗಳ ಮಾರಾಟಕ್ಕೆ ಆರೋಪಿ ಪ್ರಯತ್ನಿಸುತ್ತಿದ್ದ. ಸ್ಥಳೀಯರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿಶಾಲ್‍ನನ್ನು ಹಿಡಿದಿದ್ದಾರೆ. ಆತನ ಬಳಿ ಇದ್ದ ಮೊಬೈಲ್‍ಗಳನ್ನು ವಶಕ್ಕೆ ಪಡೆದು ದಾಖಲೆಗಳನ್ನು ಕೇಳಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಎರಡು ಸ್ಯಾಮ್‍ ಸಂಗ್ ಮೊಬೈಲ್‍ಗಳು, ರೆಡ್ ಮಿ ಕಂಪನಿಯ ಎರಡು, ಟೆಕ್ನೊ, ಜಿಓನಿ ಕಂಪನಿಯ ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್‍ ಕಳ್ಳನನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News