ಮಂಗಳೂರು: ಖಾಸಗಿ ಬಸ್‌ನ ಕೊನೆಯ ಟ್ರಿಪ್ ರದ್ದುಗೊಳಿಸಿದರೆ ಕೇಸು ದಾಖಲು

Update: 2021-02-22 16:33 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಫೆ.22: ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ. ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಸೂಚಿಸಿದ್ದಾರೆ.

ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸಿ, ಅನಾನುಕೂಲವಾಗುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ರೀತಿಯ ಉಲ್ಲಂಘನೆಗಳು ಕಂಡುಬಂದಲ್ಲಿ ಯಾವುದೇ ಮರು ನೋಟೀಸ್ ನೀಡದೆ ಮೋಟಾರು ವಾಹನ ಕಾಯ್ದೆಯ ಪ್ರಕಾರ ಕಾನೂನು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಪರವಾಗಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News