ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಯಾಗಿ ಕೆ.ಎಸ್.ರಮೇಶ್ ಅಧಿಕಾರ ಸ್ವೀಕಾರ
Update: 2021-02-22 18:25 GMT
ಚಿಕ್ಕಮಗಳೂರು, ಫೆ.22: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಕೆ.ಎಸ್.ರಮೇಶ್ ಸೋಮವಾರ ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಎಸ್.ಪೂವಿತಾ ಅವರಿಂದ ಅಧಿಕಾರ ಸ್ವೀಕರಿಸಿದರು.
ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಬಗಾದಿ ಗೌತಮ್ ಅವರನ್ನು ಸರಕಾರ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿ, ಅವರ ಸ್ಥಾನಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಸ್.ರಮೇಶ್ ಅವರನ್ನು ನೇಮಿಸಿ ಇತ್ತೀಚೆಗೆ ಆದೇಶ ಹೊರಡಿಸಿತ್ತು. ನೂತನ ಜಿಲ್ಲಾಧಿಕಾರಿ ಕೆ.ಎಸ್.ರಮೇಶ್ ಅವರು ಅಧಿಕಾರ ವಹಿಸಿಕೊಳ್ಳುವುದು ತಡವಾದ ಕಾರಣಂದ ಡಾ.ಬಗಾದಿ ಗೌತಮ್ ಅವರು ಜಿಪಂ ಸಿಇಒ ಎಸ್.ಪೂವಿತಾ ಅವರಿಗೆ ಅಧಿಕಾರ ಹಸ್ತಾಂತರಿಸಿ ಬೆಂಗಳೂರಿಗೆ ತೆರಳಿದ್ದರು.
ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ಕೆ.ಎಸ್.ರಮೇಶ್ ಪ್ರಭಾರ ಜಿಲ್ಲಾಧಿಕಾರಿಯಿಂದ ಅಧಿಕಾರ ಸ್ವೀಕರಿಸಿದರು.