ಮುತ್ತಿಗೆ ಬೆನ್ನಲ್ಲೇ ನಟ ಜಗ್ಗೇಶ್ ಮನೆಗೆ ಪೊಲೀಸ್ ಭದ್ರತೆ

Update: 2021-02-23 11:54 GMT

ಬೆಂಗಳೂರು, ಫೆ.23: ಖ್ಯಾತ ನಟ ದರ್ಶನ್ ರನ್ನು ಅವಹೇಳನ ಮಾಡಿದ್ದಾರೆ ಎನ್ನಲಾದ ಘಟನೆ ಬಳಿಕ ನಟ ಜಗ್ಗೇಶ್ ರಿಗೆ ಮುತ್ತಿಗೆ ಹಾಕಲಾಗಿದ್ದು, ಈ ಘಟನೆ ಬೆನ್ನಲ್ಲೇ ಜಗ್ಗೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಜಗ್ಗೇಶ್ ನಿವಾಸಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿಗೆ ಮೈಸೂರಿನಲ್ಲಿ, ನಟ ದರ್ಶನ್ ಅಭಿಮಾನಿಗಳು ಜಗ್ಗೇಶ್ ಅವರಿಗೆ ಮುತ್ತಿಗೆ ಹಾಕಿದ್ದರು. ಹಾಗಾಗಿ, ಭದ್ರತೆಗೆ ಪೊಲೀಸ್ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News