ಅಕ್ರಮ ಅಕ್ಕಿ ಸಾಗಾಟ: ಓರ್ವನ ಬಂಧನ

Update: 2021-02-23 16:17 GMT

ಕುಂದಾಪುರ, ಫೆ.23: ಓಮಿನಿ ಕಾರಿನಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕುಂದಾಪುರ ಆಹಾರ ನಿರೀಕ್ಷಕರ ನೇತೃತ್ವದ ತಂಡ ಫೆ.22ರಂದು ಬಂಧಿಸಿದೆ.

ಬೀಜಾಡಿ ಗ್ರಾಮದ ಹಳವಳ್ಳಿ ನಿವಾಸಿ ನಾಸಿರ್(40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಡಿ ಕಡೆಯಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಕುರಿತ ಖಚಿತ ಮಾಹಿತಿಯಂತೆ ಕುಂದಾಪುರ ಆಹಾರ ನಿರೀಕ್ಷಕ ಎಚ್.ಎಸ್.ಸುರೇಶ ನೇತೃತ್ವದ ತಂಡ ದಾಳಿ ನಡೆಸಿದೆ.

ಕಾರಿನಲ್ಲಿದ್ದ ಒಟ್ಟು 5250ರೂ. ವೌಲ್ಯದ 350 ಕೆ.ಜಿ. ಅಕ್ಕಿ, 1,50,000ರೂ. ವೌಲ್ಯದ ಕಾರನ್ನು ತಂಡ ವಶಪಡಿಸಿಕೊಂಡಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News