ಕರ್ನಾಟಕ- ಕೇರಳ ನಡುವಿನ ಅಂತರ್ ರಾಜ್ಯ ಪ್ರಯಾಣ ನಿರ್ಬಂಧಿಸಿಲ್ಲ: ಸಚಿವ ಡಾ.ಸುಧಾಕರ್
Update: 2021-02-23 17:46 GMT
ಬೆಂಗಳೂರು, ಫೆ.23: ಕರ್ನಾಟಕ ಹಾಗೂ ಕೇರಳ ರಾಜ್ಯಗಳ ನಡುವಿನ ಅಂತರ್ ರಾಜ್ಯ ಪ್ರಯಾಣವನ್ನು ರಾಜ್ಯ ನಿರ್ಬಂಧಿಸಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಕೇರಳದಿಂದ ಕರ್ನಾಟಕವನ್ನು ಪ್ರವೇಶಿಸುವ ಪ್ರಯಾಣಿಕರು 72 ಗಂಟೆ ಮೀರದ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ತಮ್ಮೊಂದಿಗೆ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.