ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆ ಮಾ.4ಕ್ಕೆ ಮುಂದೂಡಿಕೆ

Update: 2021-02-23 17:47 GMT

ಬೆಂಗಳೂರು, ಫೆ.23: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವಿಜ್ಞಾನ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಫೆ.27ರ ಬದಲಾಗಿ ಮಾ.4ಕ್ಕೆ ಮುಂದೂಡಲಾಗಿದೆ.

ಫೆ.28ರಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಪ್ರತಿ ಜಿಲ್ಲೆಯಲ್ಲಿ ಶಿಕ್ಷಕರನ್ನು, ಉಪನ್ಯಾಸಕರನ್ನು ಮತ್ತು ಶಾಲಾ ಕಾಲೇಜುಗಳನ್ನು ಬಳಸಿಕೊಳ್ಳುವ ಕಾರಣದಿಂದ ರಸ ಪ್ರಶ್ನೆ ಕಾರ್ಯಕ್ರಮವನ್ನು ಮಾ.4ಕ್ಕೆ ಮುಂದೂಡಲಾಗಿದೆ ಎಂದು ಪರಿಷತ್‍ನ ಗೌರವ ಕಾರ್ಯದರ್ಶಿ ಕೃಷ್ಣೇಗೌಡ ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.944953245, 9008442557 ಹಾಗೂ ರಾಜ್ಯ ವಿಜ್ಞಾನ ಪರಿಷತ್‍ನ ಕಚೇರಿ ಬೆಂಗಳೂರು ದೂ.080-26718939, 9483549159ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News