ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಶುಕ್ರವಾರ ರಾಜ್ಯ ಸರಕಾರಿ ನೌಕರರ ಒಕ್ಕೂಟದಿಂದ ಪ್ರತಿಭಟನೆ

Update: 2021-02-25 14:30 GMT

ಬೆಂಗಳೂರು, ಫೆ.25: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನ ವಿರೋಧಿ ನೀತಿಗಳಿಂದಾಗಿ ಸಾರ್ವಜನಿಕರು ಹಾಗೂ ನೌಕರರು ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ಆರೋಪಿಸಿ ರಾಜ್ಯ ಸರಕಾರಿ ನೌಕರರ ಒಕ್ಕೂಟ ಶುಕ್ರವಾರ(ಫೆ.26) ಪ್ರತಿಭಟನೆ ಹಮ್ಮಿಕೊಂಡಿದೆ. ಮಧ್ಯಾಹ್ನ ಭೋಜನ ವಿರಾಮದ ವೇಳೆ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ.

ಇಂಧನ, ಗ್ಯಾಸ್ ದುಬಾರಿಯಾಗಿದೆ. ಇದರಿಂದ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಸರ್ವಜನಿಕ ಸೇವೆಗಳನ್ನು ಖಾಸಗೀಕರಣ ಮಾಡಲು ಸರಕಾರಗಳು ಮುಂದಾಗಿವೆ. ಖಾಲಿ ಹುದ್ದೆ ಭರ್ತಿ ಮಾಡುತ್ತಿಲ್ಲ. ತುಟ್ಟಿಭತ್ತೆ ರದ್ದು ಮಾಡಲಾಗಿದೆ. 

ಹೀಗೆ ಸಾಲುಸಾಲು ಸಮಸ್ಯೆಗಳಿವೆ ಎಂದು ರಾಜ್ಯ ಸರಕಾರಿ ನೌಕರರ ಒಕ್ಕೂಟ ಆರೋಪಿಸಿದೆ. ತಡೆ ಹಿಡಿದಿರುವ ತುಟ್ಟಿಭತ್ತೆಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News