ನಾಗೇಶ್ ಹೆಗಡೆ, ಸಿ.ಆರ್.ಚಂದ್ರಶೇಖರ್ ಗೆ ವಿಜ್ಞಾನ ಜೀವಮಾನ ಸಾಧನೆ ಪ್ರಶಸ್ತಿ

Update: 2021-02-26 14:59 GMT
ನಾಗೇಶ್ ಹೆಗಡೆ- ಸಿ.ಆರ್.ಚಂದ್ರಶೇಖರ್

ಬೆಂಗಳೂರು, ಫೆ.26: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕೊಡಮಾಡುವ ವಿಜ್ಞಾನದಲ್ಲಿ ಜೀವಮಾನ ಸಾಧನೆಗೆ ನೀಡಲಾಗುವ ಪ್ರಶಸ್ತಿಗೆ ಹಿರಿಯ ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆ ಹಾಗೂ ಸಿ.ಆರ್.ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ಒಂದು ಲಕ್ಷ ರೂ.ನಗದು ಹಾಗೂ ಚಿನ್ನದ ಪದಕ ಒಳಗೊಂಡಿರುತ್ತದೆ. ಮಾ.2ರಂದು ನಗರದ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News