ಶಿರಾಡಿ: ಕೆಎಸ್ಸಾರ್ಟಿಸಿ - ಪೊಲೀಸ್ ಬಸ್ ನಡುವೆ ಢಿಕ್ಕಿ

Update: 2021-02-27 10:58 GMT

ನೆಲ್ಯಾಡಿ, ಫೆ.27. ಕೆಎಸ್ಸಾರ್ಟಿಸಿ ವೋಲ್ವೋ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಪೊಲೀಸ್ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಶನಿವಾರ ಅಪರಾಹ್ನ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೋಲ್ವೋ ಬಸ್ ಕೆಂಪುಹೊಳೆ ಸಮೀಪದ ತಿರುವೊಂದರಲ್ಲಿ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಪೊಲೀಸ್ ಬಸ್ ಗೆ ಢಿಕ್ಕಿಯಾಗಿದೆ ಎಂದು ದೂರಲಾಗಿದೆ.

ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News