ಫೆ.28ರಂದು ಮುಕ್ಕಚ್ಚೇರಿಯಲ್ಲಿ ವಾಣಿಜ್ಯ ಸಂಕೀರ್ಣಕ್ಕೆ ಶಂಕುಸ್ಥಾಪನೆ
Update: 2021-02-27 12:09 GMT
ಉಳ್ಳಾಲ, ಫೆ.27: ಅಲ್- ಮಸ್ಜಿದುಲ್ ಜಾಮಿಆ ಸಿದ್ದೀಕ್ ಮುಕ್ಕಚ್ಚೇರಿ ಇದರ ಅಧೀನದಲ್ಲಿ ವಾಣಿಜ್ಯ ಸಂಕೀರ್ಣ ಶಂಕುಸ್ಥಾಪನಾ ಕಾರ್ಯಕ್ರಮ ಫೆ.28 ರಂದು ಮುಕ್ಕಚ್ಚೇರಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರು ವಾಣಿಜ್ಯ ಸಂಕೀರ್ಣದ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.