ಸಿಎಂ ಬಿಎಸ್‌ವೈಗೆ ಘೇರಾವ್ ಹಾಕಲು ಯತ್ನ: ಕಾಂಗ್ರೆಸ್ ಕಾರ್ಯಕರ್ತರ ಬಂಧನ

Update: 2021-02-28 14:28 GMT

ಶಿವಮೊಗ್ಗ, ಫೆ.28: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯಕ್ರಮಕ್ಕೆ ಘೇರಾವ್ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು‌ ಪೊಲೀಸರು ಬಂಧಿಸಿದ್ದಾರೆ.

ಪೆಟ್ರೋಲ್, ಡಿಸೇಲ್ ಹಾಗೂ ಅಗತ್ಯ ವಸ್ತುಗಳ‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 'ನನ್ನೊಲುಮೆ' ಕಾರ್ಯಕ್ರಮಕ್ಕೆ ಘೇರಾವ್ ಹಾಕಲು ನಿರ್ಧರಿಸಿದ್ದರು.

ಇದನ್ನರಿತ ಪೊಲೀಸರು ಕಾಂಗ್ರೆಸ್ ಕಚೇರಿ ಸುತ್ತುವರಿದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್‌ ಸುಂದರೇಶ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದರು.

ಬೆಲೆ ಏರಿಕೆ ನಡುವೆ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಅಲ್ಲದೇ ಕೊರೋನ ಎರಡನೇ ಅಲೆ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸರ್ಕಾರ ಹೇಳುತ್ತದೆ. ಆದರೆ ಸಿಎಂಗೆ ಸನ್ಮಾನ ಕಾರ್ಯಕ್ರಮ ನಡೆಸಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News