ಇಹ್ಸಾನ್ ಕರ್ನಾಟಕ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಖಾಝಿ ಕೂರತ್ ತಂಙಳ್

Update: 2021-02-28 15:20 GMT
ಖಾಝಿ ಕೂರತ್ ತಂಙಳ್/ ಡಾ. ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್/ ಇಕ್ಬಾಲ್ ಸೇಟ್ 

ಮಂಗಳೂರು: ಸುನ್ನಿ ಸಂಘ ಕುಟುಂಬದ ಸಹಕಾರದೊಂದಿಗೆ ಕಳೆದ ಹತ್ತು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಇಹ್ಸಾನ್ ಕರ್ನಾಟಕ ಇದರ ದಶಮಾನೋತ್ಸವ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಖಾಝಿ ಸೆಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್, ಜನರಲ್ ಕನ್ವೀನರಾಗಿ ಡಾ. ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್, ಕೋಶಾಧಿಕಾರಿಯಾಗಿ ಉದ್ಯಮಿ ಇಕ್ಬಾಲ್ ಸೇಟ್ ಶಿವಮೊಗ್ಗ ಇವರನ್ನು ಆಯ್ಕೆ ಮಾಡಲಾಯಿತು.

ಸ್ವಾಗತ ಸಮಿತಿ ರಚನಾ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಹಾಲ್ ನಲ್ಲಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರು ಪ್ರಾರ್ಥನೆ ನೆರವೇರಿಸಿದರು. ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಸಭೆಯನ್ನು ಉದ್ಘಾಟಿಸಿದರು.

ಇಹ್ಸಾನ್ ಕರ್ನಾಟಕ ಅಧ್ಯಕ್ಷ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ. ಎಂ.ಎಸ್.ಎಂ. ಅಬ್ದುರ್ರಶೀದ್ ಝೈನಿ ದಶವಾರ್ಷಿಕದ 10 ತಿಂಗಳ ಹಲವು ವೈವಿಧ್ಯಮಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಉತ್ತರ ಕರ್ನಾಟಕದ ಕಳೆದ 10 ವರ್ಷಗಳ ಇಹ್ಸಾನ್ ಕಾರ್ಯವೈಖರಿಯ ವಿವರಣೆ ನೀಡಲಾಯಿತು. ಖಾಝಿ ಮಾಣಿ ಉಸ್ತಾದ್, ಕೊಡಗು ಜಿಲ್ಲಾ ಸಹಾಯಕ ಖಾಝಿ ಮಹಮೂದ್ ಮುಸ್ಲಿಯಾರ್ ಎಡಪ್ಪಾಲಂ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ. ಬಾವ ಮಾತನಾಡಿದರು.

ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ದಶವಾರ್ಷಿಕ ಸ್ವಾಗತ ಸಮಿತಿಯನ್ನು ಘೋಷಣೆ ಮಾಡಿದರು. ದಶಮಾನೋತ್ಸವದ ವಿವಿಧ ಉಪ ಸಮಿತಿಗಳಿಗೆ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿ.ಎಂ. ಮುಮ್ತಾಜ್ ಅಲಿ, ಯಾಕುಬ್ ಹೊಸನಗರ, ಮುನೀರ್ ಮಂಗಳೂರು, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ, ಮಜೀದ್ ಹಾಜಿ, ಸಮದ್ ಹಾಜಿ ಶಾರ್ಜ, ಇಸ್ಮಾಯಿಲ್ ಸಖಾಫಿ ಕೊಂಡಗೇರಿ, ಕೆಸಿಎಫ್ ನಾಯಕರಾದ ಡಿ. ಪಿ. ಯೂಸೂಫ್ ಸಖಾಫಿ ರಿಯಾದ್, ಅಲಿ ಮುಸ್ಲಿಯಾರ್ ಬಹರೈನ್, ನಝೀರ್ ಕಾಶಿಪಟ್ನ, ಪಾರೂಕ್ ಕಾಟಿಪಳ್ಳ,  ಮುಂತಾದವರು ಭಾಗವಹಿದ್ದರು ಪ್ರಧಾನ ಕಾರ್ಯದರ್ಶಿ ಹಫೀಳ್ ಸಅದಿ ಸ್ವಾಗತಿಸಿದರು. ಕಾರ್ಯದರ್ಶಿ ಹಮೀದ್ ಮುಸ್ಲಿಯಾರ್  ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News