ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ನೇಮಕ

Update: 2021-03-01 13:29 GMT

ಹೊಸದಿಲ್ಲಿ: ಪಂಜಾಬ್ ನಲ್ಲಿ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮೊದಲು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.

ಪ್ರಶಾಂತ್ ಕಿಶೋರ್ ನನ್ನ ಪ್ರಧಾನ ಸಲಹೆಗಾರರಾಗಿ ನನ್ನೊಂದಿಗೆ ಸೇರಿಕೊಂಡಿದ್ದಾರೆ. ಪಂಜಾಬ್ ಜನರ ಸ್ಥಿತಿ ಉತ್ತಮಪಡಿಸಲು  ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ. ಎಂದು ಸೋಮವಾರ ಅಮರಿಂದರ್ ತಿಳಿಸಿದರು.

ಇದಕ್ಕೂ ಮೊದಲು ಪಂಜಾಬ್ ಸಂಪುಟವು ಕಿಶೋರ್ ನೇಮಕವನ್ನು ಅನುಮೋದಿಸಿತು. ಕಿಶೋರ್ ಅವರಿಗೆ ರಾಜ್ಯ ಸಂಪುಟ ಸಚಿವರ ಸ್ಥಾನಮಾನ ಇರುತ್ತದೆ.

ಕಿಶೋರ್ ಅವರು 2017ರಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರವನ್ನು ನಿರ್ವಹಿಸಿದ್ದರು. 2017ರಲ್ಲಿ ಕಾಂಗ್ರೆಸ್ 117 ಸದಸ್ಯರ ವಿಧಾನಸಭೆಯಲ್ಲಿ 77 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರ ಹಿಡಿದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News