ಹಿರಿಯ ಪತ್ರಕರ್ತ ಎಂ.ಎನ್.ಚಕ್ರವರ್ತಿ ನಿಧನ

Update: 2021-03-01 14:16 GMT

ಬೆಂಗಳೂರು, ಮಾ.1: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಂ.ಎನ್.ಚಕ್ರವರ್ತಿ(ನಚ್ಚಿ) ಅವರು ಸೋಮವಾರ ನಿಧನರಾದರು.

ಲಂಕೇಶ್ ಪತ್ರಿಕೆಯಿಂದ ವೃತ್ತಿ ಆರಂಭಿಸಿದ್ದ ಎಂ.ಎನ್. ಚಕ್ರವರ್ತಿ ಅವರು ನಂತರ ಇಂಡಿಯನ್ ಎಕ್ಸ್ ಪ್ರೆಸ್, ಡೆಕ್ಕನ್ ಕ್ರಾನಿಕಲ್ ಪತ್ರಿಕೆಗಳಲ್ಲಿ 3 ದಶಕಕ್ಕೂ ಹೆಚ್ಚು ಕಾಲ ಪತ್ರಕರ್ತರಾಗಿ ಕೆಲಸ ನಿರ್ವಹಿಸಿದ್ದರು. ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುಲಲಿತವಾಗಿ ಬರೆಯುತ್ತಿದ್ದ ಅವರು, ಪತ್ರಕರ್ತರ ವಲಯದಲ್ಲಿ ಸ್ನೇಹಜೀವಿ ಎಂದೇ ಹೆಸರಾಗಿದ್ದರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಬೆಳಗ್ಗೆ ಅವರು ನಿಧನರಾಗಿದ್ದಾರೆ. ಇವರ ಅಂತ್ಯ ಕ್ರಿಯೆ ಮಂಗಳವಾರ ಬೆಳಗ್ಗೆ 12ಕ್ಕೆ ಬೆಂಗಳೂರಿನಲ್ಲಿ ನಡೆಯಲಿದ್ದು, ಮೃತದೇಹವನ್ನು ಬೆಳಗ್ಗೆ 9.30ರಿಂದ 11 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಮಲ್ಲೇಶ್ವರಂ 11ನೇ ಕ್ರಾಸ್‍ನ ಅವರ ಸ್ವಗೃಹದಲ್ಲಿ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News