ಶಿರ್ವ ಗ್ರಾಪಂ ಅಧ್ಯಕ್ಷರಿಗೆ ಸಾರ್ವಜನಿಕ ಶೃದ್ಧಾಂಜಲಿ

Update: 2021-03-01 14:31 GMT

ಶಿರ್ವ, ಮಾ.1: ಹೃದಯಾಘಾತದಿಂದ ನಿಧನರಾದ ಶಿರ್ವ ಗ್ರಾಪಂ ನೂತನ ಅಧ್ಯಕ್ಷ ಗ್ರೆಗರಿ ಕೊನ್ರಾಡ್ ಕ್ಯಾಸ್ತಲಿನೊ ಅವರಿಗೆ ಶಿರ್ವ ಗ್ರಾಪಂ ಕಚೇರಿ ಮುಂಭಾಗದಲ್ಲಿ ಇಂದು ಸಾರ್ವಜನಿಕವಾಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶಿರ್ವ ಗ್ರಾಪಂ ವತಿಯಿಂದ ಏರ್ಪಡಿಸಲಾದ ಶೃದ್ಧಾಂಜಲಿ ಸಭೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಶಿರ್ವ ಜಾಮಿಯಾ ಮಸೀದಿಯ ಧರ್ಮಗುರು ಸಿರಾಜುದ್ಧಿನ್ ಝೈನಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸಮಾಜಸೇವಕ ಸುರೇಶ್ ಶೆಟ್ಟಿ ಗುರ್ಮೆ ನುಡಿನಮನ ಸಲ್ಲಿಸಿದರು.

ಜಿಪಂ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಪಂ ಸದಸ್ಯರಾದ ಶಿಲ್ಪಾ ಜಿ.ಸುವರ್ಣ, ಗೀತಾಂಜಲಿ ಸುವರ್ಣ, ಕಾಪು ತಾಪಂ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಉಡುಪಿ ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಮೃತರ ಪುತ್ರ ಡಾ.ಕ್ಲಿಂಟನ್ ಕ್ಯಾಸ್ತಲಿನೋ, ತಾಪಂ ಸದಸ್ಯರಾದ ಗೀತಾ ವಾಗ್ಲೆ, ಸುಜಾತಾ ಸುವರ್ಣ, ಶಿರ್ವ ಗ್ರಾಪಂ ಉಪಾಧ್ಯಕ್ಷೆ ಗ್ರೇಸಿ ಕರ್ಡೋಜಾ, ಬೆಳ್ಳೆ ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ, ಬೆಳ್ಮಣ್ ಗ್ರಾಪಂ ಅಧ್ಯಕ್ಷ ಜನಾರ್ದನ ತಂತ್ರಿ, ಪಡುಬಿದ್ರಿ ಗ್ರಾಪಂ ಅಧ್ಯಕ್ಷ ರವಿ ಶೆಟ್ಟಿ, ಬೆಳ್ಳೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಶಿವಾಜಿ ಎಸ್.ಸುವರ್ಣ, ಜಿಪಂ ಮಾಜಿ ಸದಸ್ಯ ವಿಲ್ಸನ್ ರೊಡ್ರಿಗಸ್ ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News