ಕಂಟೈನರ್ ಲಾರಿ ಢಿಕ್ಕಿ: ಪಾದಚಾರಿ ಮೃತ್ಯು

Update: 2021-03-01 16:34 GMT

ಬ್ರಹ್ಮಾವರ, ಮಾ.1: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಲುವಳ್ಳಿ ಗ್ರಾಮದ ಧಾರಣ-ಕಂಬಳ ಎಂಬಲ್ಲಿ ಫೆ.28ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಕೃಷ್ಣ ಮರಕಾಲ(60) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆ ಯಿಂದ ಪೇತ್ರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿಯು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪೇತ್ರಿ ಕಡೆಯಿಂದ ಹೆಬ್ರಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಕೃಷ್ಣ ಮರಕಾಲಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಬಳಿಕ ಲಾರಿ ಹತೋಟಿ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡಿಗೆ ಡಿಕ್ಕಿ ಹೊಡೆದು ಗದ್ದೆಗೆ ಪಲ್ಟಿಯಾಗಿ ಬಿತ್ತು. ಈ ಅಪಘಾತದಿಂದ ಕೃಷ್ಣ ಮರಕಾಲ ತಡೆಗೋಡೆ ಸಮೇತ ಚರಂಡಿಯಲ್ಲಿ ಬಿದಿದ್ದು, ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟು. ಅಪಘಾತದಿಂದ ಲಾರಿ ಚಾಲಕ ಅಬೂಬಕ್ಕರ್ ಸಣ್ಣಪುಟ್ಟ ಗಾಯಗೊಂಡಿ ದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News