ಮಾರಣಾಂತಿ ಹಲ್ಲೆ ಪ್ರಕರಣ: ಆರೋಪಿ ಬಂಧನ

Update: 2021-03-01 16:37 GMT

ಕೋಟ, ಮಾ.1: ಸಾಲಿಗ್ರಾಮ ಸಮೀಪದ ಪಾರಂಪಳ್ಳಿ ಪಡುಕೆರೆ ಎಂಬಲ್ಲಿ ಫೆ.23ರಂದು ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕೋಟ ಪೊಲೀಸರು ಇಂದು ತಲ್ಲೂರು ಎಂಬಲ್ಲಿ ಬಂಧಿಸಿದ್ದಾರೆ.

ಪರಂಪಳ್ಳಿಯ ಗಗನ್ ಪೂಜಾರಿ ಬಂಧಿತ ಆರೋಪಿ. ಹಲ್ಲೆಯಿಂದ ಗಂಭೀರ ವಾಗಿ ಗಾಯಗೊಂಡಿರುವ ಕೋಟತಟ್ಟು ಪಡುಕೆರೆಯ ನಿವಾಸಿ ಅಕ್ಷಯ್ ಮಣಿಪಾಲದ ಆ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ಷುಲಕ ಕಾರಣಕ್ಕೆ ಗಗನ್ ಹಾಗೂ ಅಕ್ಷಯ್ ನಡುವೆ ಮೊಬೈಲ್ನಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ರಾತ್ರಿಯ ವೇಳೆಯಲ್ಲಿ ಕೋಟದ ಹೋಟೆಲ್ನಲ್ಲಿ ಊಟ ಮುಗಿಸಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಅಕ್ಷಯ್‌ನನ್ನು ಅಡ್ಡಗಟ್ಟಿದ ಗಗನ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿದ್ದಾನೆ. ನಂತರ ಅಕ್ಷಯ್ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ರಾರಿಯಾಗಿದ್ದನು ಎಂದು ದೂರಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 15ದಿನಗ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News