ನಕ್ಸಲರಿಗೆ ನೆರವು ಆರೋಪ: ಮಾ.2ರಂದು ಪೊಲೀಸ್ ಅಧಿಕಾರಿಗಳ ವಿಚಾರಣೆ

Update: 2021-03-01 16:39 GMT

ಮಂಗಳೂರು, ಮಾ.1:ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ವಿಠಲ ಮಲೆಕುಡಿಯ ಅವರ ವಿರುದ್ಧ ನಕ್ಸಲರಿಗೆ ನೆರವಾದ ಆರೋಪ ಹೊರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ನಡೆಯಲಿದೆ.

ಪ್ರಕರಣದ ದೋಷಾರೋಪಣ ಪಟ್ಟಿ ಸಲ್ಲಿಸಿದ ಪುತ್ತೂರಿನ ಅಂದಿನ ಎಎಸ್ಪಿಅನುಚೇತನ್ ಹಾಗೂ ಸರ್ಕಲ್ ಇನ್‌ಸ್ಪೆಕ್ಟರ್ ಭಾಸ್ಕರ್ ರೈ ಹಾಗೂ ಎಸ್ಸೈ ಉಮೇಶ್ ಉಪ್ಪಳಿಗೆ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ.

2012ರ ಮಾರ್ಚ್ 3ರಂದು ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಈಗಾಗಲೇ 44 ಸಾಕ್ಷಿಗಳ ವಿಚಾರಣೆ ನಡೆದಿದೆ ಎಂದು ನ್ಯಾಯವಾದಿ ದಿನೇಶ್ ಉಳ್ಳೆಪ್ಪಾಡಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News