ಅತ್ಯಾಚಾರ ಆರೋಪ: ಶರಣರ ಸೋದರ ದೊರೆಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

Update: 2021-03-01 18:26 GMT

ಬೆಂಗಳೂರು, ಮಾ.1: ಮದುವೆಯಾಗುವುದಾಗಿ ನಂಬಿಸಿ ಉಪನ್ಯಾಸಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಬೃಹನ್ಮಠದ ಮುರುಘಾರಾಜೇಂದ್ರ ಶಿವಮೂರ್ತಿ ಶರಣರ ಖಾಸಾ ಸಹೋದರ ಎಂ.ಜಿ.ದೊರೆಸ್ವಾಮಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. 

ಈ ಸಂಬಂಧ ದೊರೆಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. 
ಆರೋಪಿ ಪ್ರಭಾವಶಾಲಿ ವ್ಯಕ್ತಿಯಾಗಿದ್ದಾನೆ. ಮೇಲ್ನೋಟಕ್ಕೆ ಆರೋಪ ಸಾಬೀತುಪಡಿಸುವಂತಹ ಸಾಕ್ಷ್ಯಾಧಾರಗಳು ಕಂಡು ಬರುತ್ತಿದೆ ಎಂಬಿತ್ಯಾದಿ ಕಾರಣಗಳನ್ನು ನೀಡಿ ಜಾಮೀನು ನೀಡಲು ನ್ಯಾಯಪೀಠವು ನಿರಾಕರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News