1ರಿಂದ 5ನೇ ತರಗತಿ ಆರಂಭಿಸಲು ತೀರ್ಮಾನವಿಲ್ಲ: ಸಚಿವ ಸುರೇಶ್‍ ಕುಮಾರ್

Update: 2021-03-02 12:17 GMT

ಹುಬ್ಬಳ್ಳಿ, ಮಾ.2: ನೆರೆ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗಿನ ಶಾಲೆ ಆರಂಭಿಸಬೇಕೆ ಎಂಬುದರ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.  

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1ನೇ ತರಗತಿಯಿಂದ 5ನೇ ತರಗತಿಯನ್ನು ಆರಂಭಿಸಲು ಒತ್ತಡ ಕೇಳಿ ಬರುತ್ತಿದೆ. ಆದರೆ, ಈ ಬಗ್ಗೆ ಕೂಡಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಆರೋಗ್ಯ ಇಲಾಖೆ ತಜ್ಞರ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ.

ನೆರೆಯ ರಾಜ್ಯಗಳಲ್ಲಿ ಕೋವಿಡ್–19 ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ತಜ್ಞರ ಸಲಹೆ ಮೇರೆಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಖಾಸಗಿ ಶಾಲೆಗಳಲ್ಲೂ ಒಂದರಿಂದ 5ನೇ ತರಗತಿಗಳನ್ನು ನಡೆಸಬಾರದೆಂದು ಅವರು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News