×
Ad

ಮಾ. 27: ಜಿಲ್ಲೆಯ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್

Update: 2021-03-02 21:28 IST

ಮಂಗಳೂರು, ಮಾ.2: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದ.ಕ. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾ.27ರಂದು ಲೋಕ್ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ತಮಗೆ ಸಂಬಂಧಿಸಿದ ನ್ಯಾಯಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣ ಗಳನ್ನು ಅಂದಿನ ಲೋಕ್ ಅದಾಲತ್ ಮೂಲಕ ಶೀಘ್ರವಾಗಿ ಪರಿಹರಿಸಿಕೊಳ್ಳಬಹುದಾಗಿದೆ.

ಸಾರ್ವಜನಿಕರು ನ್ಯಾಯಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಎಲ್ಲಾ ಸಿಲ್ ಸ್ವರೂಪದ ಪ್ರಕರಣಗಳು, ರಾಜಿಯಾ ಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣ, ಮೋಟಾರು ವಾಹನ ಕಾಯ್ದೆಯಡಿ ಪರಿಹಾರಕ್ಕಾಗಿ ಸಲ್ಲಿಸಲಾದ ಅರ್ಜಿಗಳು, ಭೂಸ್ವಾದೀನ ಪರಿಹಾರಕ್ಕಾಗಿ ಸಂಬಂಧಿಸಿದ ಪ್ರಕರಣಗಳು ಇತ್ಯಾದಿಗಳನ್ನು ಲೋಕ್ ಅದಾಲತ್ ಮುಖಾಂತರ ಇತ್ಯರ್ಥಪಡಿಸಲು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಲೋಕ್ ಅದಾಲತ್‌ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿದರೆ ನ್ಯಾಯಾಲಯಕ್ಕೆ ಅವರು ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ ಪಡೆಯಬಹುದಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ನ್ಯಾಯಾಲಯ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಕೊಡಿಯಾಲ್‌ಬೈಲ್, ಮಂಗಳೂರು, ದೂ.ಸಂ: 0824-244811, ಮೊ.ಸಂ: 9480024188 ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News