ಮೂಡುಬಿದಿರೆ: ನದಿಗೆ ಹಾರಿ ಯುವಕ ಆತ್ಮಹತ್ಯೆ

Update: 2021-03-02 17:54 GMT

ಮೂಡುಬಿದಿರೆ: ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹ ಪತ್ತೆಯಾಗಿದೆ.

ಕೊಡ್ಯಡ್ಕ ಮಿತ್ತಬೈಲ್ ನಿವಾಸಿ ಸುರೇಂದ್ರ ನಾಯಕ್ (34) ಆತ್ಯಹತ್ಯೆ ಮಾಡಿಕೊಂಡಿರುವ ಯುವಕ. ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದ ಸುರೇಂದ್ರನ ಬೈಕ್, ಮೊಬೈಲ್ ಮತ್ತು ಚಪ್ಪಲಿ ಪುಚ್ಚಮೊಗರು ಸೇತುವೆಯ ಬಳಿ ಪತ್ತೆಯಾಗಿತ್ತು. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆಯಿಂದ ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬಂದಿ ಮತ್ತು ಪೊಲೀಸರು ಮಂಗಳವಾರ ಕಾರ್ಯಾಚರಣೆ ಆರಂಭಿಸಿದರು. ರಾತ್ರಿ ವೇಳೆ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News