ನಿಷ್ಪಕ್ಷಪಾತ, ಕೂಲಂಕಷ ತನಿಖೆ: ಗೃಹಸಚಿವ ಬೊಮ್ಮಾಯಿ

Update: 2021-03-03 04:33 GMT

ಬೆಂಗಳೂರು, ಮಾ.3: ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತವಾದ, ಕೂಲಂಕಷವಾಗಿ ತನಿಖೆ ನಡೆಸಲಾಗವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಡೀ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗವುದು ಎಂದರು.

ರಮೇಶ್ ಜಾರಕಿಹೊಳಿ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ, ಈ ವಿಚಾರವಾಗಿ ಎಲ್ಲವನ್ನೂ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ವರಿಷ್ಠರು ಗಮನಿಸುತ್ತಾ ಇದ್ದಾರೆ. ಅವರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News