ಸಕ್ರಿಯ ರಾಜಕಾರಣಕ್ಕೆ ಶಶಿಕಲಾ ವಿದಾಯ

Update: 2021-03-03 16:15 GMT

ಹೊಸದಿಲ್ಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ವಿ.ಕೆ. ಶಶಿಕಲಾ ಇಂದು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾರ ಪರಮಾಪ್ತೆಯಾಗಿರುವ ಶಶಿಕಲಾ ಈ ಮಹತ್ದದ ವಿಚಾರವನ್ನು ಮಾಧ್ಯಮ ಪ್ರಕಟನೆಯ ಮೂಲಕ ಘೋಷಿಸಿದ್ದಾರೆ. "ನಾನು ಎಂದಿಗೂ ಅಧಿಕಾರ ಅಥವಾ ಸ್ಥಾನವನ್ನು ಗುರಿಯಾಗಿಸಿಕೊಂಡಿಲ್ಲ'' ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಶಶಿಕಲಾ ಈ ನಿರ್ಧಾರ ಪ್ರಕಟಸಿದರು. ಶಶಿಕಲಾ ಅವರ ನಿರ್ಧಾರವು ಆಡಳಿತಾರೂಢ ಎಐಎಡಿಎಂಕೆ ಕಾರ್ಯಕರ್ತರಲ್ಲಿ ನಿಟ್ಟುಸಿರು ಬಿಡುವಂತೆ ಮಾಡುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News