ಅಶ್ಲೀಲ ಸಿಡಿ ಬಿಡುಗಡೆ ಪ್ರಕರಣ: ದಿನೇಶ್ ‌ಕಲ್ಲಹಳ್ಳಿಗೆ ಜೀವ ಬೆದರಿಕೆ ಕರೆ, ದೂರು ದಾಖಲು

Update: 2021-03-03 17:16 GMT

ಕನಕಪುರ, ಮಾ.3: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ, ತನಗೆ ಜೀವ ಬೆದರಿಕೆಯ ಕರೆಗಳು ಬರುತ್ತಿವೆ ಎಂದು ಸಿಡಿ ಬಿಡುಗಡೆ ಮಾಡಿದ ದಿನೇಶ್ ‌ಕಲ್ಲಹಳ್ಳಿ ಅವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ನಿನ್ನೆ ಸಂಜೆ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ರಾಜಕೀಯ ವಲಯದಲ್ಲಿ ರೋಚಕ ಚರ್ಚೆ ನಡೆದು ರಮೇಶ್ಜಾ ರಕಿಹೊಳಿ ರಾಜೀನಾಮೆಯನ್ನೂ ನೀಡಿದ್ದಾರೆ. ಆದರೆ ದಿನೇಶ್ ‌ಕಲ್ಲಹಳ್ಳಿ ತಮ್ಮ ನಿವಾಸದಲ್ಲಿ ಇರುವ ವೇಳೆ ದೂರವಾಣಿಯ ಮೂಲಕ ಅಪರಿಚಿತರು ಜೀವಬೆದರಿಕೆ ಒಡ್ಡುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ನಂತರ ಗ್ರಾಮಾಂತರ ಠಾಣೆಗೆ ಆಗಮಿಸಿ ದೂರು ನೀಡಿ ಬೆದರಿಕೆ ಹಾಕಿದವರ ವಿರುದ್ಧ ಕ್ರಮಕೈಗೊಂಡು, ರಕ್ಷಣೆ ನೀಡುವಂತೆ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News